ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ ಆಗಮಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸದಸ್ಯರ ಸಹಕಾರ ಕೋರಿದರು. ಸಂಘದ ಸದಸ್ಯತ್ವ ನವೀಕರಣ, ಜಿಲ್ಲಾ ಸಂಘದ ಸದಸ್ಯತ್ವ ಹಾಗೂ ವಲಯ ಸಮಿತಿಗಳಿಂದ ಮಾಸಿಕ ಸಭೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಆ. 22ರಂದು ಅಳದಂಗಡಿಯಲ್ಲಿ ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ತಾಲೂಕು ಸಂಘದ ಕಾರ್ಯದರ್ಶಿ ವಸಂತ ಕೆ. ನಾವೂರು, ಗೌರವಾಧ್ಯಕ್ಷ ಸುನಿಲ್, ಉಪಾಧ್ಯಕ್ಷ ಕೆ.ಡಿ. ಜೋಸೆಫ್, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್., ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಪೂರ್ಣ ಅತಿಥ್ಯವನ್ನು ವೇಣೂರು ಪದ್ಮಾಂಬ ಸೌಂಡ್ಸ್ & ಶಾಮಿಯಾನದ ಮಾಲಕ ತಾಲೂಕು ಸಂಘದ ಗೌರವಸಲಹೆಗಾರ ಜಿನರಾಜ್ ಜೈನ್ ವಹಿಸಿದ್ದು, ಎಲ್ಲರನ್ನು ಸತ್ಕರಿಸಿದರು. ವಲಯ ಅಧ್ಯಕ್ಷರಾದ ಸುನಿಲ್ ಸ್ವಾಗತಿಸಿ, ಮ್ಯಾಥ್ಯೂ ಕುಟ್ಟಿ ವಂದಿಸಿದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya
error: Content is protected !!