ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ರೆಖ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ರೆಖ್ಯ ಗ್ರಾಮದ ಕಟ್ಟೆ ಸರಕಾರಿ ಶಾಲೆಯಲ್ಲಿ, ಶಾಲಾ ಕೈತೋಟವನ್ನು ಶ್ರಮದಾನದ ಮೂಲಕ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಅಶೋಕ್, ಸಹ ಶಿಕ್ಷಕರಾದ ಸುಂದರ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಯಶವಂತ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಸಂಧ್ಯಾ, ಒಕ್ಕೂಟದ ಅಧ್ಯಕ್ಷರು ಹಾಗೂ ಒಕ್ಕೂಟದ ಸದಸ್ಯರು ಶ್ರಮದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಶಾಲಾ ಕೈ ತೋಟಕ್ಕೆ ತರಕಾರಿ ಬೀಜ ಹಾಗೂ ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೂ ತರಕಾರಿ ಬೀಜವನ್ನು ಯೋಜನೆಯ ವತಿಯಿಂದ ನೀಡಲಾಯಿತು.

Leave a Comment

error: Content is protected !!