September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭದಲ್ಲಿ ಶೈಕ್ಷಣಿಕ ಸಾಧಕರನ್ನು ಗೌರವಿಸಿ ಅವರು ಮಾತನಾಡಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿ ‘ ಎಕ್ಸೆಲ್ ಅಪೂರ್ವ ಸಾಧಕರನ್ನು ಹೊಂದಿದ ಕಾಲೇಜು. ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ವಿದ್ಯಾರ್ಥಿಗಳು ಹೆಸರು ಮಾಡುವಂತಾಗಲಿ ‘ ಎಂದು ಹಾರೈಸಿದರು.

ನೀಟ್ ನಲ್ಲಿ 692 ಅಂಕಗಳನ್ನು ಪಡೆದ ಆದಿತ್ ಜೈನ್ ಹಾಗೂ ನೀಟ್, ಸಿ ಇ ಟಿ, ಬೋರ್ಡ್ ಎಕ್ಸಾಂ ಸಹಿತ ಜೆ ಇ ಇ ಅಡ್ವಾನ್ಸ್ ಕ್ಲಿಯರ್ ಮಾಡಿದ ಸಂಜನಾ ಈರನ್ನವರ್ ಅವರಿಗೆ ಒಂದು ಲಕ್ಷ ಮೊತ್ತದೊಂದಿಗೆ ಗೌರವಿಸಲಾಯಿತು. ಬೋರ್ಡ್ ಎಕ್ಸಾಂ, ಸಿ ಇ ಟಿ, ನೀಟ್, ಜೆ ಇ ಇ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ 254 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು .ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಭಿರಾಮ್ , ವೇಣೂರು ವಿದ್ಯೋದಯ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶಿವರಾಮ ಹೆಗ್ಡೆ, ಉದ್ಯಮಿ ಶಮಂತ್ ಕುಮಾರ್ ಬೆಳ್ತಂಗಡಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಸಾಧಕರ ಪಟ್ಟಿಯನ್ನು ವಾಚಿಸಿದರು. ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಕನ್ನಡ ವಿಭಾಗದ ಜಯರಾಮ್ ವಂದಿಸಿದರು. ರಸಾಯನ ವಿಜ್ಞಾನ ವಿಭಾಗದ ಈಶ್ವರ್ ಶರ್ಮ ಅವರು ನಿರೂಪಿಸಿದರು.

Related posts

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya
error: Content is protected !!