22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು.

ಸಂಘದ ವ್ಯವಹಾರ ವಿವಿಧ ಚಟುವಟಿಕೆಗಳನ್ನು, ಗಮನಿಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪಾಕ್ಸ ನಬಾರ್ಡನಿಂದ ಎಂಎಸ್ಸಿ ಯೋಜನೆಯಡಿ ನೀಡಿರುವ ಗೋದಾಮು ಕಟ್ಟಡವನ್ನು ಪರಿಶೀಲಿಸಿ, ಇಲ್ಲಿ ಸಂಘ ನಡೆಸುತ್ತಿರುವ ಕೃಷಿ ಯಂತ್ರೋಪಕರಣ ಮಳಿಗೆಯನ್ನು ವೀಕ್ಷಿಸಿದರು.

ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಿರ್ದೇಶಕ ಶ್ರೀ ರಾಘವ ಮತ್ತು ವೃತ್ತಿಪರ ನಿರ್ದೆಶಕ ಗಜಾನನ ವಝೆ ಸಂಘದ ಕುರಿತು ಮಾಹಿತಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸ್ವಾಗತಿಸಿ, ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ವಂದಿಸಿದರು. ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು. ನಬಾರ್ಡ್ ಸಂಸ್ಥೆಯ ಶೀಲಾ ಎಂ. ಭಂಡಾರ್ಕರ್ ತಂಡದ ನೇತ್ರತ್ವ ವಹಿಸಿದ್ದರು.

Related posts

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya
error: Content is protected !!