26.2 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

ವೇಣೂರು,: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮಾಧ್ಯಮದ ಪ್ರೊ| ಡಾ. ಸತೀಶ್ ಕುಮಾರ್ ಅಂಡಿಂಜೆ ಅವರು ಸಮಾರಂಭವನ್ನು ಉದ್ಘಾಟಿಸಿ, ಪತ್ರಿಕೋದ್ಯಮ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳಿಗಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಅವರು ಅಧ್ಯಕ್ಷತೆ ವಹಿಸಿದ್ದರು. ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ ಡಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರೀಶ್ ಭಟ್, ಉಪನ್ಯಾಸಕಿ ಸೆಲಿನಾ ಪಿ.ಜೆ., ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಸಿನಾನ್, ನಾಯಕಿ ಸಂಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಗಂಗಾಧರ್ ಅವರು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿಯರಾದ ಶಬಾನ ಮತ್ತು ಹಫೀಸಾ ಎಸ್ ನಿರೂಪಿಸಿ, ಉಪನ್ಯಾಸಕಿ ಸೆಲಿನಾ ಪಿ.ಜೆ. ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಕು| ಸಂಚನಾ ವಂದಿಸಿದರು. ಉಪನ್ಯಾಸಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya
error: Content is protected !!