22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

ವೇಣೂರು,: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮಾಧ್ಯಮದ ಪ್ರೊ| ಡಾ. ಸತೀಶ್ ಕುಮಾರ್ ಅಂಡಿಂಜೆ ಅವರು ಸಮಾರಂಭವನ್ನು ಉದ್ಘಾಟಿಸಿ, ಪತ್ರಿಕೋದ್ಯಮ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳಿಗಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಅವರು ಅಧ್ಯಕ್ಷತೆ ವಹಿಸಿದ್ದರು. ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ ಡಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರೀಶ್ ಭಟ್, ಉಪನ್ಯಾಸಕಿ ಸೆಲಿನಾ ಪಿ.ಜೆ., ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಸಿನಾನ್, ನಾಯಕಿ ಸಂಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಗಂಗಾಧರ್ ಅವರು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿಯರಾದ ಶಬಾನ ಮತ್ತು ಹಫೀಸಾ ಎಸ್ ನಿರೂಪಿಸಿ, ಉಪನ್ಯಾಸಕಿ ಸೆಲಿನಾ ಪಿ.ಜೆ. ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಕು| ಸಂಚನಾ ವಂದಿಸಿದರು. ಉಪನ್ಯಾಸಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya
error: Content is protected !!