September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

ವೇಣೂರು,: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.
ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮಾಧ್ಯಮದ ಪ್ರೊ| ಡಾ. ಸತೀಶ್ ಕುಮಾರ್ ಅಂಡಿಂಜೆ ಅವರು ಸಮಾರಂಭವನ್ನು ಉದ್ಘಾಟಿಸಿ, ಪತ್ರಿಕೋದ್ಯಮ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳಿಗಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಅವರು ಅಧ್ಯಕ್ಷತೆ ವಹಿಸಿದ್ದರು. ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ ಡಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರೀಶ್ ಭಟ್, ಉಪನ್ಯಾಸಕಿ ಸೆಲಿನಾ ಪಿ.ಜೆ., ವಿದ್ಯಾರ್ಥಿ ಸಂಘದ ನಾಯಕ ಮಹಮ್ಮದ್ ಸಿನಾನ್, ನಾಯಕಿ ಸಂಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಗಂಗಾಧರ್ ಅವರು ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿಯರಾದ ಶಬಾನ ಮತ್ತು ಹಫೀಸಾ ಎಸ್ ನಿರೂಪಿಸಿ, ಉಪನ್ಯಾಸಕಿ ಸೆಲಿನಾ ಪಿ.ಜೆ. ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ಕು| ಸಂಚನಾ ವಂದಿಸಿದರು. ಉಪನ್ಯಾಸಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya
error: Content is protected !!