25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ ಆಗಮಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸದಸ್ಯರ ಸಹಕಾರ ಕೋರಿದರು. ಸಂಘದ ಸದಸ್ಯತ್ವ ನವೀಕರಣ, ಜಿಲ್ಲಾ ಸಂಘದ ಸದಸ್ಯತ್ವ ಹಾಗೂ ವಲಯ ಸಮಿತಿಗಳಿಂದ ಮಾಸಿಕ ಸಭೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಆ. 22ರಂದು ಅಳದಂಗಡಿಯಲ್ಲಿ ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ತಾಲೂಕು ಸಂಘದ ಕಾರ್ಯದರ್ಶಿ ವಸಂತ ಕೆ. ನಾವೂರು, ಗೌರವಾಧ್ಯಕ್ಷ ಸುನಿಲ್, ಉಪಾಧ್ಯಕ್ಷ ಕೆ.ಡಿ. ಜೋಸೆಫ್, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್., ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಪೂರ್ಣ ಅತಿಥ್ಯವನ್ನು ವೇಣೂರು ಪದ್ಮಾಂಬ ಸೌಂಡ್ಸ್ & ಶಾಮಿಯಾನದ ಮಾಲಕ ತಾಲೂಕು ಸಂಘದ ಗೌರವಸಲಹೆಗಾರ ಜಿನರಾಜ್ ಜೈನ್ ವಹಿಸಿದ್ದು, ಎಲ್ಲರನ್ನು ಸತ್ಕರಿಸಿದರು. ವಲಯ ಅಧ್ಯಕ್ಷರಾದ ಸುನಿಲ್ ಸ್ವಾಗತಿಸಿ, ಮ್ಯಾಥ್ಯೂ ಕುಟ್ಟಿ ವಂದಿಸಿದರು.

Related posts

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya
error: Content is protected !!