ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ ಆಗಮಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸದಸ್ಯರ ಸಹಕಾರ ಕೋರಿದರು. ಸಂಘದ ಸದಸ್ಯತ್ವ ನವೀಕರಣ, ಜಿಲ್ಲಾ ಸಂಘದ ಸದಸ್ಯತ್ವ ಹಾಗೂ ವಲಯ ಸಮಿತಿಗಳಿಂದ ಮಾಸಿಕ ಸಭೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಆ. 22ರಂದು ಅಳದಂಗಡಿಯಲ್ಲಿ ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ತಾಲೂಕು ಸಂಘದ ಕಾರ್ಯದರ್ಶಿ ವಸಂತ ಕೆ. ನಾವೂರು, ಗೌರವಾಧ್ಯಕ್ಷ ಸುನಿಲ್, ಉಪಾಧ್ಯಕ್ಷ ಕೆ.ಡಿ. ಜೋಸೆಫ್, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್., ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಪೂರ್ಣ ಅತಿಥ್ಯವನ್ನು ವೇಣೂರು ಪದ್ಮಾಂಬ ಸೌಂಡ್ಸ್ & ಶಾಮಿಯಾನದ ಮಾಲಕ ತಾಲೂಕು ಸಂಘದ ಗೌರವಸಲಹೆಗಾರ ಜಿನರಾಜ್ ಜೈನ್ ವಹಿಸಿದ್ದು, ಎಲ್ಲರನ್ನು ಸತ್ಕರಿಸಿದರು. ವಲಯ ಅಧ್ಯಕ್ಷರಾದ ಸುನಿಲ್ ಸ್ವಾಗತಿಸಿ, ಮ್ಯಾಥ್ಯೂ ಕುಟ್ಟಿ ವಂದಿಸಿದರು.

Related posts

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!