September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

ಅರಸಿನಮಕ್ಕಿ : ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡು ಭಾರತೀಯ ಸೈನ್ಯದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿ ಸುಬೇದಾರ್ ಹುದ್ದೆಯವರೆಗೆ ಭಡ್ತಿಗೊಂಡು ಜೂ.30ರಂದು ಸೇವಾ ನಿವೃತ್ತಿ ಹೊಂದಿ ಜು.5ರಂದು ಹುಟ್ಟೂರಿಗೆ ಆಗಮಿಸಿದ ಹತ್ಯಡ್ಕ ಗ್ರಾಮದ ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಕೊಕ್ಕಡ ಜಂಕ್ಷನ್ ನಿಂದ ಮುದ್ದಿಗೆ ಪೇಟೆವರೆಗೆ ವಾಹನದೊಂದಿಗೆ ಮೆರವಣಿಗೆ ಜರುಗಿತು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಮಾಜಿ ಸೈನಿಕರಾದ ಮೋಹನ್ ಶೆಟ್ಟಿ, ಚೆರಿಯನ್, ಜಯಚಂದ್ರ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಕಳೆಂಜ ಗ್ರಾ. ಪಂ. ಅಧ್ಯಕ್ಷ ಪ್ರಸನ್ನ ಎ. ಪಿ., ಅರಸಿನಮಕ್ಕಿ ಗ್ರಾ. ಪಂ. ಸದಸ್ಯ ಸುಧೀರ್ ಕುಮಾರ್, ಉದ್ಯಮಿ ರಹೀಮ್ ಮುದ್ದಿಗೆ ಮಾತನಾಡಿದರು.

ರಾಜರಾಮ ಟಿ. ಮುದ್ದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಹತ್ಯಡ್ಕ , ಕೊಕ್ಕಡ, ಕಳೆಂಜದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!