23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

ಅರಸಿನಮಕ್ಕಿ : ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡು ಭಾರತೀಯ ಸೈನ್ಯದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿ ಸುಬೇದಾರ್ ಹುದ್ದೆಯವರೆಗೆ ಭಡ್ತಿಗೊಂಡು ಜೂ.30ರಂದು ಸೇವಾ ನಿವೃತ್ತಿ ಹೊಂದಿ ಜು.5ರಂದು ಹುಟ್ಟೂರಿಗೆ ಆಗಮಿಸಿದ ಹತ್ಯಡ್ಕ ಗ್ರಾಮದ ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಕೊಕ್ಕಡ ಜಂಕ್ಷನ್ ನಿಂದ ಮುದ್ದಿಗೆ ಪೇಟೆವರೆಗೆ ವಾಹನದೊಂದಿಗೆ ಮೆರವಣಿಗೆ ಜರುಗಿತು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಮಾಜಿ ಸೈನಿಕರಾದ ಮೋಹನ್ ಶೆಟ್ಟಿ, ಚೆರಿಯನ್, ಜಯಚಂದ್ರ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಕಳೆಂಜ ಗ್ರಾ. ಪಂ. ಅಧ್ಯಕ್ಷ ಪ್ರಸನ್ನ ಎ. ಪಿ., ಅರಸಿನಮಕ್ಕಿ ಗ್ರಾ. ಪಂ. ಸದಸ್ಯ ಸುಧೀರ್ ಕುಮಾರ್, ಉದ್ಯಮಿ ರಹೀಮ್ ಮುದ್ದಿಗೆ ಮಾತನಾಡಿದರು.

ರಾಜರಾಮ ಟಿ. ಮುದ್ದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಹತ್ಯಡ್ಕ , ಕೊಕ್ಕಡ, ಕಳೆಂಜದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya
error: Content is protected !!