22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

ಅರಸಿನಮಕ್ಕಿ : ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡು ಭಾರತೀಯ ಸೈನ್ಯದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿ ಸುಬೇದಾರ್ ಹುದ್ದೆಯವರೆಗೆ ಭಡ್ತಿಗೊಂಡು ಜೂ.30ರಂದು ಸೇವಾ ನಿವೃತ್ತಿ ಹೊಂದಿ ಜು.5ರಂದು ಹುಟ್ಟೂರಿಗೆ ಆಗಮಿಸಿದ ಹತ್ಯಡ್ಕ ಗ್ರಾಮದ ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಕೊಕ್ಕಡ ಜಂಕ್ಷನ್ ನಿಂದ ಮುದ್ದಿಗೆ ಪೇಟೆವರೆಗೆ ವಾಹನದೊಂದಿಗೆ ಮೆರವಣಿಗೆ ಜರುಗಿತು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಮಾಜಿ ಸೈನಿಕರಾದ ಮೋಹನ್ ಶೆಟ್ಟಿ, ಚೆರಿಯನ್, ಜಯಚಂದ್ರ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಕಳೆಂಜ ಗ್ರಾ. ಪಂ. ಅಧ್ಯಕ್ಷ ಪ್ರಸನ್ನ ಎ. ಪಿ., ಅರಸಿನಮಕ್ಕಿ ಗ್ರಾ. ಪಂ. ಸದಸ್ಯ ಸುಧೀರ್ ಕುಮಾರ್, ಉದ್ಯಮಿ ರಹೀಮ್ ಮುದ್ದಿಗೆ ಮಾತನಾಡಿದರು.

ರಾಜರಾಮ ಟಿ. ಮುದ್ದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಹತ್ಯಡ್ಕ , ಕೊಕ್ಕಡ, ಕಳೆಂಜದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!