ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣವು ಜು.9 ರಂದು ವೇಣೂರು ಯಾತ್ರಿ ನಿವಾಸದಲ್ಲಿ ನಡೆಯಲಿದೆ.

ಪರಮಪೂಜ್ಯ ಮಹಾಸ್ವಾಮೀಜಿ ಭಾರತಭೂಷಣ ಡಾ| ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಪಾವನ ಸಾನಿಧ್ಯ ಮತ್ತು ಆಶೀರ್ವಚನವನ್ನು ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ವಹಿಸಲಿದ್ದಾರೆ.

ವೆಬ್ ಸೈಟ್ ನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಮೂಡಬಿದಿರೆ ಅನಾವರಣಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ ಎಂದು ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ

Leave a Comment

error: Content is protected !!