23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣವು ಜು.9 ರಂದು ವೇಣೂರು ಯಾತ್ರಿ ನಿವಾಸದಲ್ಲಿ ನಡೆಯಲಿದೆ.

ಪರಮಪೂಜ್ಯ ಮಹಾಸ್ವಾಮೀಜಿ ಭಾರತಭೂಷಣ ಡಾ| ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಪಾವನ ಸಾನಿಧ್ಯ ಮತ್ತು ಆಶೀರ್ವಚನವನ್ನು ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ವಹಿಸಲಿದ್ದಾರೆ.

ವೆಬ್ ಸೈಟ್ ನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಮೂಡಬಿದಿರೆ ಅನಾವರಣಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ ಎಂದು ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!