ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿ ವಲಯದ ಕಲ್ಮಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಕರ್ನಾಟಕ ನಾಗರಿಕ ಸೇವಾ(ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ)ನಿಯಮಾವಳಿ 1957ರ ನಿಯಮ 10(1)(ಡಿ)ಯಲ್ಲಿಯ ಅವಕಾಶದಂತೆ ಹಾಗೂ ಸರಕಾರದ ದಿನಾಂಕ 11-12-2020ರ ಅಧಿಸೂಚನೆಯಂತೆ ಪ್ರದತ್ತವಾದ ಅಧಿಕಾರದ ಅನ್ವಯ ಅಮಾನತುಗೊಳಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Comment

error: Content is protected !!