May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ.

ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ ಗ್ರಾಮದ ಜನರಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳಿಗೆ ಸಣ್ಣಸಣ್ಣ ಸಭೆಗಳನ್ನು ನಡೆಸಲು ಉಪಯೋಗವಾಗಿ ಸಣ್ಣ ಮಟ್ಟದ ಆದಾಯ ಸಹ ಬರುತ್ತಿತ್ತು. ಆದರೆ ಕೆಲವು ವರ್ಷಗಳ ಹಿಂದೆ ಮಳೆಗಾಳಿಗೆ ತುತ್ತಾಗಿ ಒಂದು ಬದಿಯ ಮೇಲ್ಚಾವಣಿ ಕುಸಿದಿದ್ದರೂ ಯಾರೂ ಗಮನಹರಿಸದ ಕಾರಣ ಇದೀಗ ಸಂಪೂರ್ಣ ಕಟ್ಟಡವೇ ನೆಲಸಮವಾಗುವ ಪರಿಸ್ಥಿತಿಗೆ ಬಂದು ತಲುಪಿದೆ. ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಿ ದುರಸ್ತಿ ಇಲ್ಲವೇ ಅದನ್ನು ನೆಲಸಮಗೊಳಿಸಿ ನೂತನ ಅಂಬೇಡ್ಕರ್ ಭವನ ನಿರ್ಮಿಸಿಕೊಡಬೇಕೆಂದು ಅಶ್ರಫ್ ಕಟ್ಟೆ ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!