38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ.

ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ ಗ್ರಾಮದ ಜನರಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳಿಗೆ ಸಣ್ಣಸಣ್ಣ ಸಭೆಗಳನ್ನು ನಡೆಸಲು ಉಪಯೋಗವಾಗಿ ಸಣ್ಣ ಮಟ್ಟದ ಆದಾಯ ಸಹ ಬರುತ್ತಿತ್ತು. ಆದರೆ ಕೆಲವು ವರ್ಷಗಳ ಹಿಂದೆ ಮಳೆಗಾಳಿಗೆ ತುತ್ತಾಗಿ ಒಂದು ಬದಿಯ ಮೇಲ್ಚಾವಣಿ ಕುಸಿದಿದ್ದರೂ ಯಾರೂ ಗಮನಹರಿಸದ ಕಾರಣ ಇದೀಗ ಸಂಪೂರ್ಣ ಕಟ್ಟಡವೇ ನೆಲಸಮವಾಗುವ ಪರಿಸ್ಥಿತಿಗೆ ಬಂದು ತಲುಪಿದೆ. ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಿ ದುರಸ್ತಿ ಇಲ್ಲವೇ ಅದನ್ನು ನೆಲಸಮಗೊಳಿಸಿ ನೂತನ ಅಂಬೇಡ್ಕರ್ ಭವನ ನಿರ್ಮಿಸಿಕೊಡಬೇಕೆಂದು ಅಶ್ರಫ್ ಕಟ್ಟೆ ಒತ್ತಾಯಿಸಿದ್ದಾರೆ.

Related posts

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya
error: Content is protected !!