23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ.

ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ ಗ್ರಾಮದ ಜನರಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳಿಗೆ ಸಣ್ಣಸಣ್ಣ ಸಭೆಗಳನ್ನು ನಡೆಸಲು ಉಪಯೋಗವಾಗಿ ಸಣ್ಣ ಮಟ್ಟದ ಆದಾಯ ಸಹ ಬರುತ್ತಿತ್ತು. ಆದರೆ ಕೆಲವು ವರ್ಷಗಳ ಹಿಂದೆ ಮಳೆಗಾಳಿಗೆ ತುತ್ತಾಗಿ ಒಂದು ಬದಿಯ ಮೇಲ್ಚಾವಣಿ ಕುಸಿದಿದ್ದರೂ ಯಾರೂ ಗಮನಹರಿಸದ ಕಾರಣ ಇದೀಗ ಸಂಪೂರ್ಣ ಕಟ್ಟಡವೇ ನೆಲಸಮವಾಗುವ ಪರಿಸ್ಥಿತಿಗೆ ಬಂದು ತಲುಪಿದೆ. ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಿ ದುರಸ್ತಿ ಇಲ್ಲವೇ ಅದನ್ನು ನೆಲಸಮಗೊಳಿಸಿ ನೂತನ ಅಂಬೇಡ್ಕರ್ ಭವನ ನಿರ್ಮಿಸಿಕೊಡಬೇಕೆಂದು ಅಶ್ರಫ್ ಕಟ್ಟೆ ಒತ್ತಾಯಿಸಿದ್ದಾರೆ.

Related posts

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!