September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ.

ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ ಗ್ರಾಮದ ಜನರಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳಿಗೆ ಸಣ್ಣಸಣ್ಣ ಸಭೆಗಳನ್ನು ನಡೆಸಲು ಉಪಯೋಗವಾಗಿ ಸಣ್ಣ ಮಟ್ಟದ ಆದಾಯ ಸಹ ಬರುತ್ತಿತ್ತು. ಆದರೆ ಕೆಲವು ವರ್ಷಗಳ ಹಿಂದೆ ಮಳೆಗಾಳಿಗೆ ತುತ್ತಾಗಿ ಒಂದು ಬದಿಯ ಮೇಲ್ಚಾವಣಿ ಕುಸಿದಿದ್ದರೂ ಯಾರೂ ಗಮನಹರಿಸದ ಕಾರಣ ಇದೀಗ ಸಂಪೂರ್ಣ ಕಟ್ಟಡವೇ ನೆಲಸಮವಾಗುವ ಪರಿಸ್ಥಿತಿಗೆ ಬಂದು ತಲುಪಿದೆ. ಸಂಬಂಧಪಟ್ಟವರು ಇತ್ತಕಡೆ ಗಮನಹರಿಸಿ ದುರಸ್ತಿ ಇಲ್ಲವೇ ಅದನ್ನು ನೆಲಸಮಗೊಳಿಸಿ ನೂತನ ಅಂಬೇಡ್ಕರ್ ಭವನ ನಿರ್ಮಿಸಿಕೊಡಬೇಕೆಂದು ಅಶ್ರಫ್ ಕಟ್ಟೆ ಒತ್ತಾಯಿಸಿದ್ದಾರೆ.

Related posts

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya
error: Content is protected !!