September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

ಅರಸಿನಮಕ್ಕಿ : ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡು ಭಾರತೀಯ ಸೈನ್ಯದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿ ಸುಬೇದಾರ್ ಹುದ್ದೆಯವರೆಗೆ ಭಡ್ತಿಗೊಂಡು ಜೂ.30ರಂದು ಸೇವಾ ನಿವೃತ್ತಿ ಹೊಂದಿ ಜು.5ರಂದು ಹುಟ್ಟೂರಿಗೆ ಆಗಮಿಸಿದ ಹತ್ಯಡ್ಕ ಗ್ರಾಮದ ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಕೊಕ್ಕಡ ಜಂಕ್ಷನ್ ನಿಂದ ಮುದ್ದಿಗೆ ಪೇಟೆವರೆಗೆ ವಾಹನದೊಂದಿಗೆ ಮೆರವಣಿಗೆ ಜರುಗಿತು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಮಾಜಿ ಸೈನಿಕರಾದ ಮೋಹನ್ ಶೆಟ್ಟಿ, ಚೆರಿಯನ್, ಜಯಚಂದ್ರ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಕಳೆಂಜ ಗ್ರಾ. ಪಂ. ಅಧ್ಯಕ್ಷ ಪ್ರಸನ್ನ ಎ. ಪಿ., ಅರಸಿನಮಕ್ಕಿ ಗ್ರಾ. ಪಂ. ಸದಸ್ಯ ಸುಧೀರ್ ಕುಮಾರ್, ಉದ್ಯಮಿ ರಹೀಮ್ ಮುದ್ದಿಗೆ ಮಾತನಾಡಿದರು.

ರಾಜರಾಮ ಟಿ. ಮುದ್ದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಹತ್ಯಡ್ಕ , ಕೊಕ್ಕಡ, ಕಳೆಂಜದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!