25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

ಬೆಳ್ತಂಗಡಿ : ನಿರಂತರ ಅಧ್ಯಯನದಿಂದ ಜ್ಞಾನಗಳಿಸುವುದರೊಂದಿಗೆ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೃಷಿಕೇಶ್ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಅಕ್ಷರವಾಣಿ ಭಿತ್ತಿಪತ್ರಿಕೆಯನ್ನು ಅನಾವರಣ ಮಾಡಿ ಮಾತನಾಡುತ್ತಾ, ಅಕ್ಷರ ಮನುಷ್ಯನ ಮಾನಸಿಕ ಸೀಮಿತತೆಯನ್ನು ದೃಢಪಡಿಸುತ್ತದೆ. ವಿದ್ಯಾರ್ಥಿಗಳು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು ಈ ಮೂಲಕ ಜೀವನಾನುಭವವನ್ನು ಹಂಚಿಕೊಳ್ಳಲು ಸಾಧ್ಯವಿದೆ. ವಿದ್ಯಾರ್ಥಿಗಳ ಬರವಣಿಗೆಗೆ ಪೂರಕವಾಗಿ ದೈನಂದಿನ ಪತ್ರಿಕೆಗಳಲ್ಲಿ ವಿದ್ಯಾರ್ಥಿ ಅಂಕಣವನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದರು. ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಅಕ್ಷರವಾಣಿ ಸಂಯೋಜಕಿ ಶ್ರೀಮತಿ ಸಿದ್ಧಿ ಆರ್ ಪ್ರಭು ಸ್ವಾಗತಿಸಿದರು. ಕು|ರೂಪಶ್ರೀ ಧನ್ಯವಾದವಿತ್ತರು. ಋತ್ವಿಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಧರ್ಮಸ್ಥಳ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಯೋಗಂ ವತಿಯಿಂದ ಗುರು ಜಯಂತಿ ಆಚರಣೆ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya
error: Content is protected !!