38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!