ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಬಳಂಜ: ಗ್ರಾಮ ಪಂಚಾಯತ್ ಬಳಂಜ ಮತ್ತು ಅರಣ್ಯ ಇಲಾಖೆ ವೇಣೂರು ಇದರ ವತಿಯಿಂದ ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು.

ಬಳಂಜ ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ವಿವಿಧ ಜಾತಿಯ 300 ಗಿಡಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್ ಜನ್ನು, ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್, ಉಪವಲಯಾರಣ್ಯಧಿಕಾರಿ ಸುರೇಶ್ ಗೌಡ, ಅರಣ್ಯ ಪಾಲಕ ಮಂಜುನಾಥ ಶರಣಪ್ಪ ಸವಳಿ, ಪಂ.ಅ.ಅಧಿಕಾರಿ ಶ್ರೀನಿವಾಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಬಾಲಕೃಷ್ಣ ಪೂಜಾರಿ, ಯಶೋಧರ ಶೆಟ್ಟಿ, ಜಯಶೆಟ್ಟಿ, ರವೀಂದ್ರ ಬಿ.ಅಮೀನ್, ನಿಝಾಮ್, ಶೋಭಾ, ಪದ್ಮಾವತಿ, ಪ್ರಸನ್ನ, ಲೀಲಾವತಿ, ಸುಚಿತ್ರಾ ಕೆ, ಯಕ್ಷಿತಾ ಕೆ, ಬೆಳ್ತಂಗಡಿ ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಅನಿತಾ ಹೆಗ್ಡೆ, ಉದ್ಯಮಿ ಖಾಸಿಂ ಕಟ್ಟೆ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!