22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ. ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಉಲ್ಲಾಸದಿಂದ ಹೊರೆಯಾಗಿಸದೆ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು, ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.

ಸಂಭ್ರಮ ಶನಿವಾರದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!