September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

ಮರೋಡಿ : ಕೂಕ್ರಬೆಟ್ಟು,ಮರೋಡಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ,”ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ   ರಾಜ್ಯಾಧ್ಯಕ್ಷ  ಪ್ರಕಾಶ್ ಅಂಚನ್ ಭೇಟಿ ನೀಡಿ, ನೂತನ ಕಟ್ಟಡ ಹಾಗು  ಕೊಠಡಿಗಳ ನಿರ್ಮಾಣದ ಕಾಮಗಾರಿ ವೀಕ್ಷಿಸಿ  ಮೆಚ್ಚುಗೆ ವ್ಯಕ್ತಪಡಿಸಿದರು.
 ನಾಲ್ಕು ವರ್ಷದ ಹಿಂದೆ 16 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು ಮುಚ್ಚುವ ಸ್ಥಿತಿಗೆ ತಲುಪಿದ ಶಾಲೆಯನ್ನು ದತ್ತು ಪಡೆದ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿಯ ಸಹಕಾರದಿಂದ ಇದೀಗ ಶಾಲೆಯಲ್ಲಿ 180 ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತೆ ಆಗಿದೆ.


ಸರಕಾರಿ ಶಾಲೆ  ಉಳಿಸಿ ಬೆಳೆಸಿ ಮತ್ತು ಶಾಲಾಭಿವೃದ್ದಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಊರಿನ ಶಿಕ್ಷಣ ಪ್ರೇಮಿಗಳಿಂದ ಶಾಲೆಯ ಸಾಧನೆಯನ್ನು ಕಂಡು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಶಾಲೆಯ ಬೆಳವಣಿಗೆಗೆ ಪೂರಕವಾಗಿ, ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ದತ್ತು ಪಡೆದು  ರಾಜ್ಯ ಮಟ್ಟದಲ್ಲಿ ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸಿದ  ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಶಾಲೆಗೆ ನೂತನ  ಬಸ್ ನೀಡಲಾಯಿತು.ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ  300 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುವ ಗುರಿ ಹೊಂದಿದ್ದು, ರಾಜ್ಯದಲ್ಲಿ ಎರಡನೇ ಮಾದರಿ ಸರಕಾರಿ  ಶಾಲೆಯಾಗಿ ಗುರುತಿಸಲ್ಪಡುವ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮತ್ತು ಯೋಜನೆ ರೂಪಿಸಲಾಗಿದ್ದು, ನಿಮ್ಮೆಲ್ಲರ ಸಹಕಾರ ಸಿಕ್ಕಿದರೆ ಶಾಲೆಯನ್ನು  ಅದ್ಬುತ ರೀತಿಯಲ್ಲಿ  ಮಾಡುವ ಭರವಸೆಯನ್ನು ಪ್ರಕಾಶ್ ಅಂಚನ್ ವ್ಯಕ್ತಪಡಿಸಿದ್ದಾರೆ.

 ಸಮಾಲೋಚನೆ ಸಭೆ: ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ “ಸರಕಾರಿ ಶಾಲೆ ಉಳಿಸಿ ಬೆಳೆಸಿ ” ಸಮಿತಿ ಇದರ ಅಧ್ಯಕ್ಷ ಜಯಂತ್ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ  ಶಾಲಾ ಶಿಕ್ಷಕರು ಮತ್ತು ಶಾಲಾಭಿವೃದ್ದಿ ಸಮಿತಿ ಪ್ರಮುಖರ ಜೊತೆಯಲ್ಲಿ ಸಮಾಲೋಚನೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಯಂತ್ ಕೋಟ್ಯಾನ್ ಅವರು ಶಾಸಕ ಹರೀಶ್ ಪೂಂಜ ಅವರ  ನೇತೃತ್ವದಲ್ಲಿ ಅಗಸ್ಟ್ ತಿಂಗಳಿನಲ್ಲಿ ನೂತನ ಕಟ್ಟಡವನ್ನು ಲೋಕಾರ್ಪಣೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ.ಶಾಲೆಯ ಸಂಪೂರ್ಣ ಅಭಿವೃದ್ಧಿ ದೃಷ್ಟಿಯಿಂದ ಜೊತೆಯಾಗಿ ಕೆಲಸ ಮಾಡುವ  ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ  ಕಾರ್ಯದರ್ಶಿ ನಾರಾಯಣ ಪೂಜಾರಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಗ್ರಾ.ಪಂ.ಸದಸ್ಯರಾದ ಅಶೋಕ್ ಪೂಜಾರಿ, ಸರಕಾರಿ ಶಾಲೆ ಉಳಿಸಿ ಬೆಳೆಸಿ  ರಾಜ್ಯ ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಅಂಚನ್,ಸದಸ್ಯರಾದ ಮಹೇಶ್ ಕುಲಾಲ್ ಡೆಚ್ಚಾರು,ಅರುಣ್ ಗೌಡ, ರಾಮಚಂದ್ರ ಪೂಜಾರಿ, ಮುಖ್ಯೋಪಾಧ್ಯಾಯಿನಿ ಸುಪಲ  ಮತ್ತಿತರರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya
error: Content is protected !!