22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಇದರ‌ ವತಿಯಿಂದ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಪುಂಜಾಲಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರ ಶರತ್ ಕುಮಾರ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಮಾತನಾಡಿ, ಮದ್ಯಪಾನ ಹಾಗೂ ಮಾದಕ ವಸ್ತು ಗಳು ಮನುಷ್ಯನಿಗೆ ದೊಡ್ಡ ರೋಗವಾಗಿದೆ. ಇದರಿಂದ ಎಷ್ಟೋ ಅಪಘಾತ ಆತ್ಮಹತ್ಯೆ ಮೊದಲಾದ ಘಟನೆಗಳು ಮಧ್ಯಪಾನದಿಂದ ಹೆಚ್ಚಾಗಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈ ಕಡೆಗೆ ಗಮನ ಹರಿಸದೆ ಕೇವಲ ಓದುವ ಕಡೆ ಗಮನ ಹರಿಸಿ ಹೆತ್ತವರ ಕನಸನ್ನು ನನಸು ಮಾಡಬೇಕು‌. ಓದುವ ವಯಸ್ಸಿನಲ್ಲಿ ಯಾರೊಬ್ಬರೂ ದಾರಿತಪ್ಪಬಾರದು. ಗುಟ್ಕಾ ಧೂಮಪಾನಗಳಿಂದ ಯುವಜನತೆಯ ಜೀವನ ಹಾಳಾಗುತ್ತದೆ. ಸಹವಾಸ ದೋಷ ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಯಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಯಲಿ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಪಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾ.ಯೋ. ಜಿಲ್ಲಾ ನಿರ್ದೇಶಕರ ಮಹಾಬಲ ಕುಲಾಲ್, ಜನಜಾಗೃತಿ ವಲಯಾಧ್ಯಕ್ಷ ಪದ್ಮನಾಭ ಶಾಲಿಯನ್ ಹಾಗೂ ಯೋಜನಾಧಿಕಾರಿ ದಯಾನಂದ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya
error: Content is protected !!