30.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

ಧಮ೯ಸ್ಥಳ: ಶರಾವತಿ ವಸತಿ ಗೃಹದ ಎದುರಿನಲ್ಲಿ ಸುಮಾರು 60 ರಿಂದ 70 ವರ್ಷ ಪ್ರಾಯದ ಅಪರಿಚಿತ ಗಂಡಸು ಅಸ್ವಸ್ಥರಾಗಿ ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಶರಾವತಿ ವಸತಿ ಗೃಹದ ಎದುರಿನಲ್ಲಿ ಬಿದ್ದು, ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಮಾಹಿತಿ ಕಛೇರಿಯಿಂದ 108 ಅಂಬ್ಯುಲೆನ್ಸ್ ನವರಿಗೆ ಕರೆ ಮಾಡಿ 108 ಅಂಬ್ಯುಲೆನ್ಸ್ ನಲ್ಲಿ ಅಪರಿಚಿತ ವ್ಯಕ್ತಿಯನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಬತ್ರೆಗೆ ಕಳುಹಿಸಿಕೊಟ್ಟಿದ್ದು, ವ್ಯಕ್ತಿಯನ್ನು ಆಸ್ಬತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿರುವುದಾಗಿದ್ದು, ಸುಮಾರು 60-70 ವರ್ಷ ಪ್ರಾಯದ ಅಪರಿಚಿತ ಗಂಡಸು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು, ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ಮೃತರ ವಾರೀಸುದಾರರ ಪತ್ತೆಯ ಬಗ್ಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

Related posts

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!