27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ.

ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಕ್ಷೇತ್ರದಲ್ಲಿ ಸದಸ್ಯರಾಗಿದ್ದ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶದಂತೆ ಈ ಸ್ಥಾನ ಖಾಲಿ ಎಂದು ಜಿಲ್ಲಾಧಿಕಾರಿಗಳು ನೀಡಿದ ವರದಿಯಂತೆ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಸ್ಥಾನಕ್ಕೆ ಜು.23ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಉಪಚುನಾವಣೆಯ ಪ್ರಕ್ರಿಯೆ ಜು.6ರಿಂದ ಪ್ರಾರಂಭಗೊಂಡಿದ್ದು, ಈ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಇದೀಗ ಉಚ್ಚ ನ್ಯಾಯಾಲಯ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧು ಗೊಳಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಾಂತರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ ೧ನೇ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆನ್ನು ತಕ್ಷಣಕ್ಕೆ ತಡೆಹಿಡಿಯುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ. ಉಪ ಚುನಾವಣಾ ಪಕ್ರಿಯೆಗೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿನ ಆದೇಶದವರೆಗೆ ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡುವಂತೆ ಸಂಬಂಧಪಟ್ಟ, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮತ್ತು ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!