22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಆರೋಪ ಎದುರಿಸುತ್ತಿರುವ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್ ಕಾನತ್ತೂರು ಕ್ಷೇತ್ರದಲ್ಲಿ ಮತ್ತೆ ಪ್ರಮಾಣ ಪೂರೈಕೆ ಮಾಡುವ ಮೂಲಕ ಆಪಾದನೆ ಮಾಡುವವರಿಗೆ ಸವಾಲೆಸೆದಿದ್ದಾರೆ.

ಫೆ.30ರಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಈ ಮೂವರು ‘ನಮ್ಮ ಮೇಲೆ ವಿನಾಕಾರಣ ಆರೋಪ ಮಾಡಲಾಗುತ್ತಿದೆ. ಇದರಿಂದ ಮನ ನೊಂದಿರುವ ನಾವು 10 ದಿನದೊಳಗೆ ಕಾಸರಗೋಡಿನ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನಕ್ಕೆ ತೆರಳಿ ಪ್ರಮಾಣ ಮಾಡಿರುವುದಾಗಿ ಹೇಳಿದ್ದೆವು. ಅದರಂತೆ ಕಾನತ್ತೂರು ಕ್ಷೇತ್ರಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿ ಪ್ರಮಾಣ ಮಾಡಲು ಒಂದು ದಿನಾಂಕವನ್ನು ನೀಡಬೇಕೆಂದು ಆಡಳಿತ ಮಂಡಳಿಗೆ ಮನವಿ ಮಾಡಿದ್ದೆವು. ಆದರೆ ಅವರು ಈಗಾಗಲೇ ಒಮ್ಮೆ ನೀವು ಬಂದು ದೂರು ನೀಡಿರುತ್ತೀರಿ. ಅದು ಅರ್ಧದಲ್ಲೇ ನಿಂತಿರುತ್ತದೆ. ಮತ್ತೊಮ್ಮೆ ನೀವು ಆಣೆ-ಪ್ರಮಾಣ ಮಾಡುವುದಿದ್ದಲ್ಲಿ 2 ಕಡೆಯವರು ಬಂದು ನಿಮ್ಮ ಸ್ವ-ಇಚ್ಛೆಯಲ್ಲಿ ಮಾಡಬಹುದು’ ಎಂದು ತಿಳಿಸಿದ್ದಾರೆ. ಅದರಂತೆ ನಾವು ದೈವಗಳ ಮುಂದೆ ಜು.4ರಂದು ಪ್ರಮಾಣ ಮಾಡಿದ್ದೇವೆ. ಈಗಾಗಲೇ ನಮ್ಮ ಮೇಲೆ ಆಪಾದನೆ ಮಾಡಿದ ವ್ಯಕ್ತಿಗಳು ಪ್ರಮಾಣ ಮಾಡಲು ಸಿದ್ಧರೆಂದು ಹೇಳಿಕೆ ನೀಡಿದ್ದು, ಆ ಮಾತಿನಂತೆ ಕಾನತ್ತೂರಿಗೆ ತೆರಳಿ ಆಣೆ ಪ್ರಮಾಣ ಮಾಡಲಿ. ಈ ಬಗ್ಗೆ ನಮಗೆ ಮುಂಚಿತವಾಗಿ ತಿಳಿಸಿದ್ದಲ್ಲಿ ಸಮಕ್ಷಮದಲ್ಲಿ ಮತ್ತೊಮ್ಮೆ ಪ್ರಮಾಣ ಮಾಡಲು ಸಿದ್ಧರಿದ್ದೇವೆ ಎಂದು ಮಲ್ಲಿಕ್ ಜೈನ್, ಉದಯ್‌ ಜೈನ್, ಧೀರಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya
error: Content is protected !!