23.9 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಆರೋಪ ಎದುರಿಸುತ್ತಿರುವ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್ ಕಾನತ್ತೂರು ಕ್ಷೇತ್ರದಲ್ಲಿ ಮತ್ತೆ ಪ್ರಮಾಣ ಪೂರೈಕೆ ಮಾಡುವ ಮೂಲಕ ಆಪಾದನೆ ಮಾಡುವವರಿಗೆ ಸವಾಲೆಸೆದಿದ್ದಾರೆ.

ಫೆ.30ರಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಈ ಮೂವರು ‘ನಮ್ಮ ಮೇಲೆ ವಿನಾಕಾರಣ ಆರೋಪ ಮಾಡಲಾಗುತ್ತಿದೆ. ಇದರಿಂದ ಮನ ನೊಂದಿರುವ ನಾವು 10 ದಿನದೊಳಗೆ ಕಾಸರಗೋಡಿನ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನಕ್ಕೆ ತೆರಳಿ ಪ್ರಮಾಣ ಮಾಡಿರುವುದಾಗಿ ಹೇಳಿದ್ದೆವು. ಅದರಂತೆ ಕಾನತ್ತೂರು ಕ್ಷೇತ್ರಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿ ಪ್ರಮಾಣ ಮಾಡಲು ಒಂದು ದಿನಾಂಕವನ್ನು ನೀಡಬೇಕೆಂದು ಆಡಳಿತ ಮಂಡಳಿಗೆ ಮನವಿ ಮಾಡಿದ್ದೆವು. ಆದರೆ ಅವರು ಈಗಾಗಲೇ ಒಮ್ಮೆ ನೀವು ಬಂದು ದೂರು ನೀಡಿರುತ್ತೀರಿ. ಅದು ಅರ್ಧದಲ್ಲೇ ನಿಂತಿರುತ್ತದೆ. ಮತ್ತೊಮ್ಮೆ ನೀವು ಆಣೆ-ಪ್ರಮಾಣ ಮಾಡುವುದಿದ್ದಲ್ಲಿ 2 ಕಡೆಯವರು ಬಂದು ನಿಮ್ಮ ಸ್ವ-ಇಚ್ಛೆಯಲ್ಲಿ ಮಾಡಬಹುದು’ ಎಂದು ತಿಳಿಸಿದ್ದಾರೆ. ಅದರಂತೆ ನಾವು ದೈವಗಳ ಮುಂದೆ ಜು.4ರಂದು ಪ್ರಮಾಣ ಮಾಡಿದ್ದೇವೆ. ಈಗಾಗಲೇ ನಮ್ಮ ಮೇಲೆ ಆಪಾದನೆ ಮಾಡಿದ ವ್ಯಕ್ತಿಗಳು ಪ್ರಮಾಣ ಮಾಡಲು ಸಿದ್ಧರೆಂದು ಹೇಳಿಕೆ ನೀಡಿದ್ದು, ಆ ಮಾತಿನಂತೆ ಕಾನತ್ತೂರಿಗೆ ತೆರಳಿ ಆಣೆ ಪ್ರಮಾಣ ಮಾಡಲಿ. ಈ ಬಗ್ಗೆ ನಮಗೆ ಮುಂಚಿತವಾಗಿ ತಿಳಿಸಿದ್ದಲ್ಲಿ ಸಮಕ್ಷಮದಲ್ಲಿ ಮತ್ತೊಮ್ಮೆ ಪ್ರಮಾಣ ಮಾಡಲು ಸಿದ್ಧರಿದ್ದೇವೆ ಎಂದು ಮಲ್ಲಿಕ್ ಜೈನ್, ಉದಯ್‌ ಜೈನ್, ಧೀರಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya
error: Content is protected !!