28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

ಧಮ೯ಸ್ಥಳ: ಶರಾವತಿ ವಸತಿ ಗೃಹದ ಎದುರಿನಲ್ಲಿ ಸುಮಾರು 60 ರಿಂದ 70 ವರ್ಷ ಪ್ರಾಯದ ಅಪರಿಚಿತ ಗಂಡಸು ಅಸ್ವಸ್ಥರಾಗಿ ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಶರಾವತಿ ವಸತಿ ಗೃಹದ ಎದುರಿನಲ್ಲಿ ಬಿದ್ದು, ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಮಾಹಿತಿ ಕಛೇರಿಯಿಂದ 108 ಅಂಬ್ಯುಲೆನ್ಸ್ ನವರಿಗೆ ಕರೆ ಮಾಡಿ 108 ಅಂಬ್ಯುಲೆನ್ಸ್ ನಲ್ಲಿ ಅಪರಿಚಿತ ವ್ಯಕ್ತಿಯನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಬತ್ರೆಗೆ ಕಳುಹಿಸಿಕೊಟ್ಟಿದ್ದು, ವ್ಯಕ್ತಿಯನ್ನು ಆಸ್ಬತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿರುವುದಾಗಿದ್ದು, ಸುಮಾರು 60-70 ವರ್ಷ ಪ್ರಾಯದ ಅಪರಿಚಿತ ಗಂಡಸು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು, ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ಮೃತರ ವಾರೀಸುದಾರರ ಪತ್ತೆಯ ಬಗ್ಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!