27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ.

ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಕ್ಷೇತ್ರದಲ್ಲಿ ಸದಸ್ಯರಾಗಿದ್ದ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶದಂತೆ ಈ ಸ್ಥಾನ ಖಾಲಿ ಎಂದು ಜಿಲ್ಲಾಧಿಕಾರಿಗಳು ನೀಡಿದ ವರದಿಯಂತೆ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಸ್ಥಾನಕ್ಕೆ ಜು.23ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಉಪಚುನಾವಣೆಯ ಪ್ರಕ್ರಿಯೆ ಜು.6ರಿಂದ ಪ್ರಾರಂಭಗೊಂಡಿದ್ದು, ಈ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಇದೀಗ ಉಚ್ಚ ನ್ಯಾಯಾಲಯ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧು ಗೊಳಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಾಂತರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ ೧ನೇ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆನ್ನು ತಕ್ಷಣಕ್ಕೆ ತಡೆಹಿಡಿಯುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ. ಉಪ ಚುನಾವಣಾ ಪಕ್ರಿಯೆಗೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿನ ಆದೇಶದವರೆಗೆ ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡುವಂತೆ ಸಂಬಂಧಪಟ್ಟ, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮತ್ತು ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya
error: Content is protected !!