24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಆರೋಪ ಎದುರಿಸುತ್ತಿರುವ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್ ಕಾನತ್ತೂರು ಕ್ಷೇತ್ರದಲ್ಲಿ ಮತ್ತೆ ಪ್ರಮಾಣ ಪೂರೈಕೆ ಮಾಡುವ ಮೂಲಕ ಆಪಾದನೆ ಮಾಡುವವರಿಗೆ ಸವಾಲೆಸೆದಿದ್ದಾರೆ.

ಫೆ.30ರಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಈ ಮೂವರು ‘ನಮ್ಮ ಮೇಲೆ ವಿನಾಕಾರಣ ಆರೋಪ ಮಾಡಲಾಗುತ್ತಿದೆ. ಇದರಿಂದ ಮನ ನೊಂದಿರುವ ನಾವು 10 ದಿನದೊಳಗೆ ಕಾಸರಗೋಡಿನ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನಕ್ಕೆ ತೆರಳಿ ಪ್ರಮಾಣ ಮಾಡಿರುವುದಾಗಿ ಹೇಳಿದ್ದೆವು. ಅದರಂತೆ ಕಾನತ್ತೂರು ಕ್ಷೇತ್ರಕ್ಕೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿ ಪ್ರಮಾಣ ಮಾಡಲು ಒಂದು ದಿನಾಂಕವನ್ನು ನೀಡಬೇಕೆಂದು ಆಡಳಿತ ಮಂಡಳಿಗೆ ಮನವಿ ಮಾಡಿದ್ದೆವು. ಆದರೆ ಅವರು ಈಗಾಗಲೇ ಒಮ್ಮೆ ನೀವು ಬಂದು ದೂರು ನೀಡಿರುತ್ತೀರಿ. ಅದು ಅರ್ಧದಲ್ಲೇ ನಿಂತಿರುತ್ತದೆ. ಮತ್ತೊಮ್ಮೆ ನೀವು ಆಣೆ-ಪ್ರಮಾಣ ಮಾಡುವುದಿದ್ದಲ್ಲಿ 2 ಕಡೆಯವರು ಬಂದು ನಿಮ್ಮ ಸ್ವ-ಇಚ್ಛೆಯಲ್ಲಿ ಮಾಡಬಹುದು’ ಎಂದು ತಿಳಿಸಿದ್ದಾರೆ. ಅದರಂತೆ ನಾವು ದೈವಗಳ ಮುಂದೆ ಜು.4ರಂದು ಪ್ರಮಾಣ ಮಾಡಿದ್ದೇವೆ. ಈಗಾಗಲೇ ನಮ್ಮ ಮೇಲೆ ಆಪಾದನೆ ಮಾಡಿದ ವ್ಯಕ್ತಿಗಳು ಪ್ರಮಾಣ ಮಾಡಲು ಸಿದ್ಧರೆಂದು ಹೇಳಿಕೆ ನೀಡಿದ್ದು, ಆ ಮಾತಿನಂತೆ ಕಾನತ್ತೂರಿಗೆ ತೆರಳಿ ಆಣೆ ಪ್ರಮಾಣ ಮಾಡಲಿ. ಈ ಬಗ್ಗೆ ನಮಗೆ ಮುಂಚಿತವಾಗಿ ತಿಳಿಸಿದ್ದಲ್ಲಿ ಸಮಕ್ಷಮದಲ್ಲಿ ಮತ್ತೊಮ್ಮೆ ಪ್ರಮಾಣ ಮಾಡಲು ಸಿದ್ಧರಿದ್ದೇವೆ ಎಂದು ಮಲ್ಲಿಕ್ ಜೈನ್, ಉದಯ್‌ ಜೈನ್, ಧೀರಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya
error: Content is protected !!