May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

 ಬೆಳ್ತಂಗಡಿ:  ಬೆಳ್ತಂಗಡಿಯ ಬಸ್‌ನಿಲ್ದಾಣ ಮುಂಭಾಗದ  ಸಾಂತೋಮ್ ಟವರ್‍ಸ್‌ನಲ್ಲಿ ಡಾ| ರಂಜನ್ ಕುಮಾರ್ ಅವರ   ಅನುಗ್ರಹ ಕ್ಲಿನಿಕ್  ಜು. 7 ರಂದು ಶುಭಾರಂಭಗೊಂಡಿತು.

ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸ್ತರ ಶರತ್ ಕೃಷ್ಣ ಪಡವೆಟ್ನಾಯ, ಕ್ರೈಸ್ತ ಧರ್ಮಗುರುಗಳಾದ  ಫಾ|ಬಿನೋಯ್  ಮತ್ತು ಲಾಯಿಲ ಮಸೀದಿಯ ಧರ್ಮಗುರುಗಳಾದ  ಹಂಝ ಮದನಿ, ದೀಪ ಪ್ರಜ್ವಲಿಸಿ ಉದ್ಘಾಟಿಸಿ,ಶುಭ ಕೋರಿದರು. 

ಈ ಸಂದರ್ಭದಲ್ಲಿ ತಾಲೂಕಿನ ವೈದ್ಯರುಗಳು ಹಾಗೂ ಹಿತೈಷಿಗಳು ಆಗಮಿಸಿ ನೂತನ ಅನುಗ್ರಹ ಕ್ಲಿನಿಕ್ ಗೆ ಶುಭ ಹಾರೈಸಿದರು. 
ಅತಿಥಿಗಳನ್ನು ಸ್ವಾಗತಿಸಿದ ಡಾ|ರಂಜನ್ ಕುಮಾರ್ ಅವರು ಕಳೆದ 19 ವರ್ಷಗಳಿಂದ ಉಜಿರೆ ಹಾಗು ಬೆಳ್ತಂಗಡಿಯ ಜನತೆಗೆ ವೈದ್ಯಕೀಯ ಸೇವೆ ನೀಡುತ್ತಿದ್ದು ಈ ಹೊಸ ಕ್ಲಿನಿಕ್ ನಲ್ಲಿ  ಬೆಳಗ್ಗೆ 9 ರಿಂದ ಸಾಯಂಕಾಲ 6 ಗಂಟೆಯವರೆಗೆ ಎಲ್ಲಾ ತರಹದ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆ ಲಭ್ಯವಿರುವುದಾಗಿ ತಿಳಿಸಿದರು.

ಜ್ವರ, ಶೀತ, ಕೆಮ್ಮು, ಬಿಪಿ, ಶುಗರ್ ಮುಂತಾದ ಸಾಮಾನ್ಯ  ಕಾಯಿಲೆಗಳಲ್ಲದೆ ವಿಶೇಷವಾಗಿ ಥೈರೊಯ್ಡ್, ಅಲರ್ಜಿ, ಅಸ್ತಮಾ, ವರ್ಟಿಗೋ, ಮೈಗ್ರೇನ್, ಕ್ಯಾನ್ಸರ್, ಕಿವುಡುತನ, ಕಿವಿ, ಮೂಗು, ಗಂಟಲು ಕಾಯಿಲೆ, ರಕ್ತಹೀನತೆ ಮತ್ತು ಅಪೌಷ್ಟಿಕತೆ, ಧೂಮಪಾನ ಮತ್ತು ಮದ್ಯಪಾನ ಚಟ, ಜನರಲ್ ಹೆಲ್ತ್ ಚೆಕ್ ಅಪ್, ಗರ್ಭಿಣಿ ಮತ್ತು ಮಕ್ಕಳ ತಪಾಸಣೆ, ಮುಟ್ಟಿನ  ಸಮಸ್ಯೆ, ಹಾರ್ಮೋನ್ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಲಹೆ,   ನೆಬುಲೈ ಸೇಶನ್, ಗ್ಲುಕೋಸ್ ಡ್ರಿಪ್, ಆಕ್ಸಿಜನ್, ಡೆ-ಕೇರ್ ಇತ್ಯಾದಿ ಸೌಲಭ್ಯವಿದೆ ಎಂದು ತಿಳಿಸಿದರು.

ಡಾ| ಚೈತ್ರಾ ಆರ್ . ಉಪಸ್ಥಿತರಿದ್ದು ಅತಿಥಿಗಳನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಇಡೀ ದಿನ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಉಚಿತ ಬಿಪಿ, ಶುಗರ್ ,spo2 ತಪಾಸಣೆ ಯಲ್ಲಿ ತಾಲೂಕಿನ ನೂರಾರು ಫಲಾನುಭವಿಗಳು  ಪ್ರಯೋಜನ ಪಡೆದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!