24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ಭಾಷಣದಂತಿತ್ತು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಬೇಷರತ್ತಾಗಿ ಘೋಷಿಸಿದ ಐದು ಗ್ಯಾರಂಟಿ ಭಾಗ್ಯಗಳ ಮೇಲೆ ರಾಜ್ಯದ ಜನತೆ ಅಪಾರ ನೀರಿಕ್ಷೆಯೊಂದಿಗೆ ಕಾಯುತ್ತಿದ್ದು, ಇವುಗಳನ್ನು ಮುಂಗೈಗೆ ಬೆಲ್ಲ ಮುಟ್ಟಿಸಿದಂತೆ ಘೋಷಿಸಿ ಹೆಚ್ಚಿನ ಫಲಾನುಭವಿಗಳನ್ನು ಹೊರಗಿಡುವ ಯತ್ನ ನಡೆಸಿಕೊಟ್ಟ ಮಾತು ಉಳಿಸಿಕೊಳ್ಳಲಾಗದ ಸರ್ಕಾರವೆಂಬ ಹಣೆಪಟ್ಟಿ ಕಟ್ಟಿಕೊಂಡಿದೆ.
ವಿದ್ಯುತ್‌ದರ ಹೆಚ್ಚಳದಿಂದ ತತ್ತರಿಸಿದ ಕೈಗಾರಿಕಾ ವಲಯಕ್ಕೆ ಯಾವುದೇ ಉತ್ತೇಜನ ದೊರಕದಿರುವುದರಿಂದ ಉತ್ಪಾದನೆ ಕುಸಿದು, ನಿರುದ್ಯೋಗ ಪ್ರಮಾಣ ಹೆಚ್ಚಿ, ಬೆಲೆಯೇರಿಕೆಯ ಭೀತಿ ಉಂಟಾಗಿದೆ. ಮೋಟಾರು ವಾಹನ ತೆರಿಗೆ ಏರಿಕೆಯಿಂದ ದ್ವಿಚಕ್ರ ವಾಹನಗಳ ಬೆಲೆ ಏರಿಕೆಯುಂಟಾಗಿ ಯುವಜನತೆಯ ದೈನಂದಿನ ಚಟುವಟಿಕೆ ಕುಂಠಿತಗೊಳ್ಳಲಿದೆ. ಎ.ಪಿ.ಎಂ.ಸಿ ಕಾಯಿದೆ ತಿದ್ದುಪಡಿ ಹಿಂತೆಗೆತದಿಂದ ಕೃಷಿ ವಲಯಕ್ಕೆ ಮಾರಕವಾಗಲಿದೆ. ಅಡಿಕೆ ತೋಟಕ್ಕೆ ಮಾರಕವಾಗಿರುವ ಎಲೆಚುಕ್ಕಿ ರೋಗಕ್ಕೆ ಸೂಕ್ತ ಪರಿಹಾರ ಹಾಗೂ ಸಂಶೋಧನೆಗೆ ನಿಧಿ ಕಾಯ್ದಿರಿಸದೆ ರೈತಾಪಿ ವರ್ಗಕ್ಕೆ ನಿರಾಸೆಯಾಗಿದೆ. ನೀರಾವರಿ ಕ್ಷೇತ್ರಕ್ಕೂ ಯಾವುದೇ ಕೊಡುಗೆ ನೀಡದೆ ತಾರತಮ್ಯವೆಸಗಲಾಗಿದೆ. ಜಿಲ್ಲೆಯ ಮೀನುಗಾರಿಕೆ ವಲಯಕ್ಕೂ ಅನ್ಯಾಯವಾಗಿದೆ. ಪಠ್ಯಪುಸ್ತಕದ ವಿಷಯದಲ್ಲಿ ನೈಜ್ಯ ಇತಿಹಾಸ ತಿರುಚುವ ಕೆಲಸ ನಡೆದಿದೆ. ಒಟ್ಟಾರೆಯಾಗಿ ಈ ಮುಂಗಡಪತ್ರ ಆರ್ಥಿಕ ಶಿಸ್ತಿನ ಹಳಿ ತಪ್ಪಿಸಿ ಅಭಿವೃದ್ಧಿ ಕುಂಠಿತವಾಗಿ ನಾಡಿನ ಜನತೆಗೆ ಬಲುದೊಡ್ಡ ಹೊರೆಯಾಗಲಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya
error: Content is protected !!