24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಇದರ‌ ವತಿಯಿಂದ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಪುಂಜಾಲಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರ ಶರತ್ ಕುಮಾರ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಮಾತನಾಡಿ, ಮದ್ಯಪಾನ ಹಾಗೂ ಮಾದಕ ವಸ್ತು ಗಳು ಮನುಷ್ಯನಿಗೆ ದೊಡ್ಡ ರೋಗವಾಗಿದೆ. ಇದರಿಂದ ಎಷ್ಟೋ ಅಪಘಾತ ಆತ್ಮಹತ್ಯೆ ಮೊದಲಾದ ಘಟನೆಗಳು ಮಧ್ಯಪಾನದಿಂದ ಹೆಚ್ಚಾಗಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈ ಕಡೆಗೆ ಗಮನ ಹರಿಸದೆ ಕೇವಲ ಓದುವ ಕಡೆ ಗಮನ ಹರಿಸಿ ಹೆತ್ತವರ ಕನಸನ್ನು ನನಸು ಮಾಡಬೇಕು‌. ಓದುವ ವಯಸ್ಸಿನಲ್ಲಿ ಯಾರೊಬ್ಬರೂ ದಾರಿತಪ್ಪಬಾರದು. ಗುಟ್ಕಾ ಧೂಮಪಾನಗಳಿಂದ ಯುವಜನತೆಯ ಜೀವನ ಹಾಳಾಗುತ್ತದೆ. ಸಹವಾಸ ದೋಷ ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಯಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಯಲಿ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಪಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾ.ಯೋ. ಜಿಲ್ಲಾ ನಿರ್ದೇಶಕರ ಮಹಾಬಲ ಕುಲಾಲ್, ಜನಜಾಗೃತಿ ವಲಯಾಧ್ಯಕ್ಷ ಪದ್ಮನಾಭ ಶಾಲಿಯನ್ ಹಾಗೂ ಯೋಜನಾಧಿಕಾರಿ ದಯಾನಂದ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya
error: Content is protected !!