25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಶ್ರೀ ಕೃಷಾನುಗ್ರಹ ಸಭಾ ಭವನದಲ್ಲಿ ಜು. 6 ರಂದು ಜರಗಿತು.
ನೂತನ ಪದಾಧಿಕಾರಿಗಳಿಗೆ ನಿಯೋಜಿತ ಜಿಲ್ಲಾ ರಾಜ್ಯಪಾಲ ವಿಕ್ರಂ ದತ್ತ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಎಂ.ಅನಂತ ಭಟ್ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಗವರ್ನರ್ ಡಾ.ರಮೇಶ, ರೋನಲ್ ಲೆಫ್ಟಿನೆಂಟ್ ಯಶವಂತ ಪಟವರ್ಧನ್ ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ರಕ್ಷಾ ರಾಘ್ನೇಶ್ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ದಯಾನಂದ ನಾಯಕ್, ಡಾ.ಪ್ರದೀಪ್ ಎ., ಶ್ರೀನಿವಾಸ ರಾವ್ ಅತಿಥಿಗಳನ್ನು ಧನಂಜಯ ರಾವ್ ಸದಸ್ಯರನ್ನು ಪರಿಚಯಿಸಿದರು.

ಅಕ್ಷತಾ ವಿದ್ಯಾಕುಮಾರ್ ಹಾಗೂ ಸಂದೇಶ ರಾವ್ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡ್ ವಂದಿಸಿದರು.

Related posts

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya
error: Content is protected !!