26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ.

ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಕ್ಷೇತ್ರದಲ್ಲಿ ಸದಸ್ಯರಾಗಿದ್ದ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶದಂತೆ ಈ ಸ್ಥಾನ ಖಾಲಿ ಎಂದು ಜಿಲ್ಲಾಧಿಕಾರಿಗಳು ನೀಡಿದ ವರದಿಯಂತೆ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಸ್ಥಾನಕ್ಕೆ ಜು.23ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಉಪಚುನಾವಣೆಯ ಪ್ರಕ್ರಿಯೆ ಜು.6ರಿಂದ ಪ್ರಾರಂಭಗೊಂಡಿದ್ದು, ಈ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಇದೀಗ ಉಚ್ಚ ನ್ಯಾಯಾಲಯ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧು ಗೊಳಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಾಂತರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ ೧ನೇ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆನ್ನು ತಕ್ಷಣಕ್ಕೆ ತಡೆಹಿಡಿಯುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ. ಉಪ ಚುನಾವಣಾ ಪಕ್ರಿಯೆಗೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿನ ಆದೇಶದವರೆಗೆ ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡುವಂತೆ ಸಂಬಂಧಪಟ್ಟ, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮತ್ತು ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

Suddi Udaya
error: Content is protected !!