27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ.

ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಕ್ಷೇತ್ರದಲ್ಲಿ ಸದಸ್ಯರಾಗಿದ್ದ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶದಂತೆ ಈ ಸ್ಥಾನ ಖಾಲಿ ಎಂದು ಜಿಲ್ಲಾಧಿಕಾರಿಗಳು ನೀಡಿದ ವರದಿಯಂತೆ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಸ್ಥಾನಕ್ಕೆ ಜು.23ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಉಪಚುನಾವಣೆಯ ಪ್ರಕ್ರಿಯೆ ಜು.6ರಿಂದ ಪ್ರಾರಂಭಗೊಂಡಿದ್ದು, ಈ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಇದೀಗ ಉಚ್ಚ ನ್ಯಾಯಾಲಯ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧು ಗೊಳಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಾಂತರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ ೧ನೇ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆನ್ನು ತಕ್ಷಣಕ್ಕೆ ತಡೆಹಿಡಿಯುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ. ಉಪ ಚುನಾವಣಾ ಪಕ್ರಿಯೆಗೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿನ ಆದೇಶದವರೆಗೆ ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡುವಂತೆ ಸಂಬಂಧಪಟ್ಟ, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮತ್ತು ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!