May 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ.

ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಕ್ಷೇತ್ರದಲ್ಲಿ ಸದಸ್ಯರಾಗಿದ್ದ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧುಗೊಳಿಸಿ, ಹೊಸದಾಗಿ ಚುನಾವಣೆ ನಡೆಸಲು ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ನೀಡಿತ್ತು. ಈ ಆದೇಶದಂತೆ ಈ ಸ್ಥಾನ ಖಾಲಿ ಎಂದು ಜಿಲ್ಲಾಧಿಕಾರಿಗಳು ನೀಡಿದ ವರದಿಯಂತೆ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ 1ನೇ ಸ್ಥಾನಕ್ಕೆ ಜು.23ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಉಪಚುನಾವಣೆಯ ಪ್ರಕ್ರಿಯೆ ಜು.6ರಿಂದ ಪ್ರಾರಂಭಗೊಂಡಿದ್ದು, ಈ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಇದೀಗ ಉಚ್ಚ ನ್ಯಾಯಾಲಯ ಗೋಪಾಲಕೃಷ್ಣ ಕೆ. ಇವರ ಆಯ್ಕೆಯನ್ನು ಆಸಿಂಧು ಗೊಳಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಾಂತರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ ೧ನೇ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆನ್ನು ತಕ್ಷಣಕ್ಕೆ ತಡೆಹಿಡಿಯುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ. ಉಪ ಚುನಾವಣಾ ಪಕ್ರಿಯೆಗೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿನ ಆದೇಶದವರೆಗೆ ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡುವಂತೆ ಸಂಬಂಧಪಟ್ಟ, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಮತ್ತು ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ಈ ಬಗ್ಗೆ ಸೂಕ್ತ ತಿಳುವಳಿಕೆಯನ್ನು ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!