25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಪುರಾಣದಿಂದ ಆಧುನಿಕ ವಿಜ್ಞಾನದವರೆಗೆ ಪ.ರಾಮಕೃಷ್ಣ ಶಾಸ್ತ್ರಿಯವರು ಅಧ್ಯಯನ ಮಾಡಿದ್ದಾರೆ ಎಂದರು.ಅಧ್ಯಕ್ಷತೆಯನ್ನು ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತ್ರಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಸ್ತ್ರಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆ ಮಾಡಲಾಯಿತು.ಕುರಿಯ ವಿಠಲಶಾಸ್ತ್ರಿಸಾಂಸ್ಕೃತಿಕ ಪ್ರತಿಷ್ಠಾನ ಸಂಚಾಲಕರು ಎನ್. ಅಶೋಕ ಭಟ್ ಉಜಿರೆ ಅಭಿನಂದನಾ ನುಡಿಗಳನ್ನಾಡಿದರು.ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನಾ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ಸ್ವಾಗತಿಸಿದರು.ನ್ಯಾಯವಾದಿ ಧನಂಜಯ್ ರಾವ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಶಾಸ್ತ್ರಿಯವರ ಒಡನಾಡಿಗಳು, ಆತ್ಮೀಯರು, ಬಂಧುಗಳು, ಸಾಹಿತ್ಯದ ಪರಿಚಾರಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya
error: Content is protected !!