24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಪುರಾಣದಿಂದ ಆಧುನಿಕ ವಿಜ್ಞಾನದವರೆಗೆ ಪ.ರಾಮಕೃಷ್ಣ ಶಾಸ್ತ್ರಿಯವರು ಅಧ್ಯಯನ ಮಾಡಿದ್ದಾರೆ ಎಂದರು.ಅಧ್ಯಕ್ಷತೆಯನ್ನು ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತ್ರಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಸ್ತ್ರಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆ ಮಾಡಲಾಯಿತು.ಕುರಿಯ ವಿಠಲಶಾಸ್ತ್ರಿಸಾಂಸ್ಕೃತಿಕ ಪ್ರತಿಷ್ಠಾನ ಸಂಚಾಲಕರು ಎನ್. ಅಶೋಕ ಭಟ್ ಉಜಿರೆ ಅಭಿನಂದನಾ ನುಡಿಗಳನ್ನಾಡಿದರು.ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನಾ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ಸ್ವಾಗತಿಸಿದರು.ನ್ಯಾಯವಾದಿ ಧನಂಜಯ್ ರಾವ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಶಾಸ್ತ್ರಿಯವರ ಒಡನಾಡಿಗಳು, ಆತ್ಮೀಯರು, ಬಂಧುಗಳು, ಸಾಹಿತ್ಯದ ಪರಿಚಾರಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

Suddi Udaya
error: Content is protected !!