ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರಾದ ದಿ| ಡಾ.ವಿ.ಎಸ್ ಆಚಾರ್ಯರವರು 84 ನೇ ಹುಟ್ಟು ಹಬ್ಬವನ್ನು ಜು. 7 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಬೆಳ್ತಂಗಡಿ ಇವರು ನೀಡಿದಂತಹ ಗಿಡಗಳನ್ನು ಶಾಲಾ ಮಖ್ಯ ಶಿಕ್ಷಕಿ ಶ್ತೀಮತಿ ಹೇಮಲತಾ ಎಮ್ ಆರ್ ಉಪಸ್ಧಿತರಿದ್ದು, ಮಕ್ಕಳಿಗೆ ಗಿಡಗಳನ್ನು ಹಂಚಿದರು. ನೀಡಿದಂತಹ ಗೈಡ್ ವಿದ್ಯಾರ್ಥಿ ಸಿಂಚನ ಹಾಗೂ ಸ್ಕೌಟ್ ವಿದ್ಯಾರ್ಥಿಯಾದ ಜೈದೀಪ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Leave a Comment

error: Content is protected !!