July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು ,ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯುತ್ತಿರುವ ಸಂಸ್ಥೆಯನ್ನು ತಮ್ಮ ಮನೆಯಂತೆ ಪ್ರೀತಿ ಕಾಳಜಿಯಿಂದ ಗೌರವಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಸರ್ವತೋಮುಖ ಬೆಳವಣಿಗೆ ಹೊಂದಬಹುದೆಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ|ಜೊಸೆಫ್ ಎನ್.ಎಂ ಹೇಳಿದರು.

ಅವರು ಇತ್ತೀಚೆಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ನೂತನ ಸಂಚಾಲಕರಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆವಹಿಸಿ “ನಿಷ್ಕಾಮ ಕರ್ಮದಿಂದ ಮಾಡಿದ ಸೇವೆ ಭಗವಂತನಿಗೆ ಪ್ರಿಯವಾಗುವುದು. ಸ್ವಾರ್ಥ ರಹಿತ ಸೇವೆಯನ್ನು ಮಾಡಿದಾಗ ಜೀವನದಲ್ಲಿ ಸಂತೋಷವನ್ನು ಕಾಣಲು ಸಾಧ್ಯ “ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ವಂ|ಜೆರೊಮ್ ಡಿಸೋಜಾ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕ ವಿನ್ಸೆಂಟ್ ರೊಡ್ರಿಗಸ್ ಸ್ವಾಗತಿಸಿ, ಉಪನಿರ್ದೇಶಕಿ ಪ್ರಿಯಾ ಜ್ಯೋತಿ ಕುಟಿನ್ಹಾ ವಂದಿಸಿ, ವಿದ್ಯಾರ್ಥಿ ನಾಯಕ ಮಹಮ್ಮದ್ ಇಸಾಕ್ ಅನಿಸಿಕೆ ಹಂಚಿಕೊಂಡರು.

ವಿದ್ಯಾರ್ಥಿಗಳಾದ ಅಫ್ರೀನ್ ತಾಜ್ ಹಾಗೂ ರಕ್ಷಣ್ ಅಡಪ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!