25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ 2023- 24 ನೇ ಸಾಲಿನ ಆಯವ್ಯಯವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಸಮಿತಿ ವಿಮರ್ಶಾತ್ಮಕವಾಗಿ ಸ್ವಾಗತಿಸಿದೆ.

ಈ ಆಯವ್ಯವನ್ನು ಮಂಡಿಸುವ ಸಂದರ್ಭದಲ್ಲಿಯೂ ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ, ಶಾಂತಿ ಮತ್ತು ಸೌಹಾರ್ದತೆಯ ನೆಲೆಬೀಡಾಗಿ ಕಾಪಾಡಿಕೊಳ್ಳುವ ಬದ್ಧತೆಯನ್ನು ಪುನರುಚ್ಚರಿಸಿರುವುದು ಕೂಡ ಸ್ವಾಗತಾರ್ಹ.

ಬಜೆಟ್ ನಲ್ಲಿ ಆದಿವಾಸಿ ಸಮುದಾಯಗಳ ಬಹು ದಿನಗಳ ಮುಖ್ಯ ಬೇಡಿಕೆಯಾದ ಎಸ್.ಸಿ.ಪಿ ಮತ್ತು ಟಿ.ಎಸ್. ಪಿ. ಉಪಯೋಜನೆಯ ಹಣವನ್ನು ಇತರೆ ಉದ್ದೇಶಗಳಿಗೆ ಮತ್ತು ಇತರೆ ಇಲಾಖೆಗಳ ಬಳಕೆಗೆ ಅವಕಾಶ ಮಾಡಿಕೊಡುತ್ತಿದ್ದ ಕಾಯ್ದೆಯ 7- ಡಿ ಪರಿಚ್ಛೇದವನ್ನು ಕೈ ಬಿಟ್ಟಿರುವುದು ಅತ್ಯಂತ ಸ್ವಾಗತಾರ್ಹವಾದದ್ದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾಗಿಸಿರುವ ದಲಿತ-ಬುಡಕಟ್ಟು ಉಪ ಯೋಜನೆ-ಎಸ್. ಸಿ.ಪಿ ಮತ್ತು ಟಿ.ಎಸ್. ಪಿ. ಗೆ ಈ ಬಜೆಟ್ ನಲ್ಲಿ 34,294 ಕೋಟಿ ರೂ.ಗಳನ್ನು ಒದಗಿಸಿರುವುದು ಅಂದರೆ ಹಿಂದಿನ ಬಜೆಟ್ ಗಿಂತ 4000 ಕೋಟಿ ರೂ.ಗಳನ್ನು ಹೆಚ್ಚಿಗೆ ನೀಡಿದ್ದಾರೆ. ಇದನ್ನು ಸ್ವಾಗತಿಸಿರುವ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯು ಪೂರ್ಣ ಹಣವನ್ನು ಈ ಸಮುದಾಯಗಳ ಅಭಿವೃದ್ದಿಗೆ, ಅವರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ವಿನಿಯೋಗಿಸಬೇಕು, ಅದಕ್ಕೆ ತಕ್ಕುದಾದ ಪ್ರಾಯೋಗಿಕ ಕಾರ್ಯ ಯೋಜನೆಯನ್ನು ಸಮುದಾಯಗಳ ಪ್ರತಿನಿಧಿಗಳು, ಸಂಘಟನೆಗಳೊಂದಿಗೆ ಸಮಾಲೋಚಿಸಿ ರೂಪಿಸಬೇಕು ಎಂದು ಆಗ್ರಹಿಸಿದೆ.

ಹಾಗೆಯೇ ಈ ಬಜೆಟ್ ನಲ್ಲಿ ಆದಿವಾಸಿ ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಠಿಕ ಆಹಾರವನ್ನು 6 ತಿಂಗಳಿನಿಂದ 12 ತಿಂಗಳಿಗೆ ವಿಸ್ತರಿಸಿರುವುದು ಸ್ವಾಗತಾರ್ಹ. ನಮ್ಮ ಬಹುದಿನಗಳ ಈ ಅಗತ್ಯ ಬೇಡಿಕೆಯನ್ನು ಒಪ್ಪಿದ್ದಾರೆ. ಹಾಗೇ ಮರಾಠಿ ನಾಯ್ಕ ಮುಂತಾದ ಮೂಲ ಆದಿವಾಸಿ ಸಮುದಾಯಗಳಿಗೆ ವಿಸ್ತರಿಸಬೇಕು ಎಂದು ಆಗ್ರಹಿಸಿದೆ.

ಇದೇ ಹೊತ್ತಿನಲ್ಲಿ ಆದಿವಾಸಿಗಳ ಬದುಕಿನಲ್ಲಿ ಪರಿವರ್ತನೆ ತರುವಲ್ಲಿ ಅರಣ್ಯ ಹಕ್ಕುಗಳ ಕಾಯ್ದೆ 2006 ರಂತೆ ಭೂಮಿ, ಅರಣ್ಯ, ಸಮುದಾಯ ಹಕ್ಕುಗಳು , ಜನರ ಮೂಲಭೂತ ಸೌಕರ್ಯಗಳು ದಕ್ಕುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಭೂಮಿ ಖರೀದಿ, ನಿವೇಶನ, ಮನೆ ನಿರ್ಮಾಣಕ್ಕೆ ಅನುದಾನವನ್ನು ಹೆಚ್ಚಿಸಬೇಕು. ಇವಕ್ಕೆ ಅತೀ ಪ್ರಾಮುಖ್ಯತೆಯನ್ನು ನೀಡಬೇಕಿದೆ.

ಈ ದೆಸೆಯಲ್ಲಿ ಸರಕಾರವು ಸಮುದಾಯಗಳು, ಸಂಘಟನೆಗಳ ಪ್ರತಿನಿಧಿಗಳ ಸಮಾಲೋಚನಾ ಸಭೆಯನ್ನು ಮುಖ್ಯಮಂತ್ರಿಗಳ ಅದ್ಯಕ್ಷತೆಯಲ್ಲಿ ಕೂಡಲೇ ಕರೆಯ ಬೇಕೆಂದು ಒತ್ತಾಯಿಸಿದೆ ಎಂದು ವಸಂತ ನಡ ಜಿಲ್ಲಾ ಸಂಚಾಲಕ ಹಾಗೂ ತಾಲೂಕು ಅಧ್ಯಕ್ಷ, ಜಯಾನಂದ ಪಿಲಿಕಲ, ತಾಲೂಕು ಪ್ರಧಾನ ಕಾರ್ಯದರ್ಶಿ,
ಶೇಖರ್ ಎಲ್ ತಾಲೂಕು ಸಂಚಾಲಕ‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!