22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜು.8 ರಂದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಡಯಾಲಿಸಿಸ್ ಸೆಂಟರ್ ನಲ್ಲಿ ಒಂದು ಮೆಶಿನ್ ಹಾಳಾಗಿ ನಾಲ್ಕು ತಿಂಗಳಾದರೂ ದುರಸ್ತಿ ಪಡಿಸದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳ ಜೊತೆ ಆಸ್ಪತ್ರೆಯ ಸೌಲಭ್ಯಗಳು ದೊರೆಯುವ ಬಗ್ಗೆ ವಿಚಾರಣೆ ನಡೆಸಿದರು.

ರೋಗಿಗಳು ಆಸ್ಪತ್ರೆಯಲ್ಲಿ ಸೌಲಭ್ಯ ದೊರೆಯುವ ಬಗ್ಗೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್, ತಾಲೂಕು ಆಡಳಿತಾಧಿಕಾರಿ ಡಾ| ಚಂದ್ರಕಾಂತ್ ಆಸ್ಪತ್ರೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಚಿವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಇದ್ದರೂ ರೋಗಿಗಳ ದಾಖಲಾತಿಯಿಲ್ಲ ತಿಂಗಳಿಗೆ 30 ಹೆರಿಗೆ ಮಾತ್ರ ಆಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಇವುಗಳನ್ನು ಹೆಚ್ಚಿಸುವ ಬಗ್ಗೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ಇರುವ ವೈದ್ಯರು ಮತ್ತು ಸಿಬ್ಬಂದಿಗಳ ಬಗ್ಗೆ ವಿಚಾರಿಸಿ ಡಯಾಲಿಸಿಸ್ ನ ಈಗಿತನಕ ಅವಧಿ ಮುಗಿದಿದ್ದು, ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು. ಅಲ್ಟ್ರಾ ಸೌಂಡ್ ಮೆಶಿನ್ ಮತ್ತು ಅನಸ್ತೇಶಿಯಾ ವರ್ಕ್ ಸ್ಟೇಶನ್ ಮಾಡಲು ಸೂಚಿಸಿದ್ದೇನೆ . ಹೊಸ ಸಾಮಾಗ್ರಿಗಳು ಬರುತ್ತದೆ. ತಾಲೂಕು ಆಸ್ಪತ್ರೆಯಲ್ಲಿ 60 ಹೆರಿಗೆ ಆಗಬೇಕು ಬೆಳ್ತಂಗಡಿಯಲ್ಲಿ 30 ಮಾತ್ರ ಆಗುತ್ತಿದ್ದು ಹೆಚ್ಚು ಹೆರಿಗೆಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂಎಲ್ ಸಿ ಹರೀಶ್ ಕುಮಾರ್ , ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಅಬ್ದುಲ್ ರಹಿಮಾನ್ ಪಡ್ಪು, ರಾಜಶೇಖರ ಶೆಟ್ಟಿ, ಸತೀಶ್ ಕಾಶಿಪಟ್ಣ, ಚಿದಾನಂದ ಎಲ್ದಡ್ಕ, ಜಯವಿಕ್ರಮ ಕಲ್ಲಾಪು , ಮೊದಲಾದವರು ಉಪಸ್ಥಿತರಿದ್ದರು.

Related posts

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya
error: Content is protected !!