28.7 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜು.8 ರಂದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಡಯಾಲಿಸಿಸ್ ಸೆಂಟರ್ ನಲ್ಲಿ ಒಂದು ಮೆಶಿನ್ ಹಾಳಾಗಿ ನಾಲ್ಕು ತಿಂಗಳಾದರೂ ದುರಸ್ತಿ ಪಡಿಸದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳ ಜೊತೆ ಆಸ್ಪತ್ರೆಯ ಸೌಲಭ್ಯಗಳು ದೊರೆಯುವ ಬಗ್ಗೆ ವಿಚಾರಣೆ ನಡೆಸಿದರು.

ರೋಗಿಗಳು ಆಸ್ಪತ್ರೆಯಲ್ಲಿ ಸೌಲಭ್ಯ ದೊರೆಯುವ ಬಗ್ಗೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್, ತಾಲೂಕು ಆಡಳಿತಾಧಿಕಾರಿ ಡಾ| ಚಂದ್ರಕಾಂತ್ ಆಸ್ಪತ್ರೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಚಿವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಇದ್ದರೂ ರೋಗಿಗಳ ದಾಖಲಾತಿಯಿಲ್ಲ ತಿಂಗಳಿಗೆ 30 ಹೆರಿಗೆ ಮಾತ್ರ ಆಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಇವುಗಳನ್ನು ಹೆಚ್ಚಿಸುವ ಬಗ್ಗೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ಇರುವ ವೈದ್ಯರು ಮತ್ತು ಸಿಬ್ಬಂದಿಗಳ ಬಗ್ಗೆ ವಿಚಾರಿಸಿ ಡಯಾಲಿಸಿಸ್ ನ ಈಗಿತನಕ ಅವಧಿ ಮುಗಿದಿದ್ದು, ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು. ಅಲ್ಟ್ರಾ ಸೌಂಡ್ ಮೆಶಿನ್ ಮತ್ತು ಅನಸ್ತೇಶಿಯಾ ವರ್ಕ್ ಸ್ಟೇಶನ್ ಮಾಡಲು ಸೂಚಿಸಿದ್ದೇನೆ . ಹೊಸ ಸಾಮಾಗ್ರಿಗಳು ಬರುತ್ತದೆ. ತಾಲೂಕು ಆಸ್ಪತ್ರೆಯಲ್ಲಿ 60 ಹೆರಿಗೆ ಆಗಬೇಕು ಬೆಳ್ತಂಗಡಿಯಲ್ಲಿ 30 ಮಾತ್ರ ಆಗುತ್ತಿದ್ದು ಹೆಚ್ಚು ಹೆರಿಗೆಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂಎಲ್ ಸಿ ಹರೀಶ್ ಕುಮಾರ್ , ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಅಬ್ದುಲ್ ರಹಿಮಾನ್ ಪಡ್ಪು, ರಾಜಶೇಖರ ಶೆಟ್ಟಿ, ಸತೀಶ್ ಕಾಶಿಪಟ್ಣ, ಚಿದಾನಂದ ಎಲ್ದಡ್ಕ, ಜಯವಿಕ್ರಮ ಕಲ್ಲಾಪು , ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!