25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜು.8 ರಂದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಡಯಾಲಿಸಿಸ್ ಸೆಂಟರ್ ನಲ್ಲಿ ಒಂದು ಮೆಶಿನ್ ಹಾಳಾಗಿ ನಾಲ್ಕು ತಿಂಗಳಾದರೂ ದುರಸ್ತಿ ಪಡಿಸದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳ ಜೊತೆ ಆಸ್ಪತ್ರೆಯ ಸೌಲಭ್ಯಗಳು ದೊರೆಯುವ ಬಗ್ಗೆ ವಿಚಾರಣೆ ನಡೆಸಿದರು.

ರೋಗಿಗಳು ಆಸ್ಪತ್ರೆಯಲ್ಲಿ ಸೌಲಭ್ಯ ದೊರೆಯುವ ಬಗ್ಗೆ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್, ತಾಲೂಕು ಆಡಳಿತಾಧಿಕಾರಿ ಡಾ| ಚಂದ್ರಕಾಂತ್ ಆಸ್ಪತ್ರೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಚಿವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಇದ್ದರೂ ರೋಗಿಗಳ ದಾಖಲಾತಿಯಿಲ್ಲ ತಿಂಗಳಿಗೆ 30 ಹೆರಿಗೆ ಮಾತ್ರ ಆಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಇವುಗಳನ್ನು ಹೆಚ್ಚಿಸುವ ಬಗ್ಗೆ ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ಇರುವ ವೈದ್ಯರು ಮತ್ತು ಸಿಬ್ಬಂದಿಗಳ ಬಗ್ಗೆ ವಿಚಾರಿಸಿ ಡಯಾಲಿಸಿಸ್ ನ ಈಗಿತನಕ ಅವಧಿ ಮುಗಿದಿದ್ದು, ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು. ಅಲ್ಟ್ರಾ ಸೌಂಡ್ ಮೆಶಿನ್ ಮತ್ತು ಅನಸ್ತೇಶಿಯಾ ವರ್ಕ್ ಸ್ಟೇಶನ್ ಮಾಡಲು ಸೂಚಿಸಿದ್ದೇನೆ . ಹೊಸ ಸಾಮಾಗ್ರಿಗಳು ಬರುತ್ತದೆ. ತಾಲೂಕು ಆಸ್ಪತ್ರೆಯಲ್ಲಿ 60 ಹೆರಿಗೆ ಆಗಬೇಕು ಬೆಳ್ತಂಗಡಿಯಲ್ಲಿ 30 ಮಾತ್ರ ಆಗುತ್ತಿದ್ದು ಹೆಚ್ಚು ಹೆರಿಗೆಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಂಎಲ್ ಸಿ ಹರೀಶ್ ಕುಮಾರ್ , ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಅಬ್ದುಲ್ ರಹಿಮಾನ್ ಪಡ್ಪು, ರಾಜಶೇಖರ ಶೆಟ್ಟಿ, ಸತೀಶ್ ಕಾಶಿಪಟ್ಣ, ಚಿದಾನಂದ ಎಲ್ದಡ್ಕ, ಜಯವಿಕ್ರಮ ಕಲ್ಲಾಪು , ಮೊದಲಾದವರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!