23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

ವೇಣೂರು: ವೇಣೂರು ಲಯನ್ಸ್ ಕ್ಲಬ್‌ನ 2023-24ನೇ ಸಾಲಿನ ಅಧ್ಯಕ್ಷ ನಿರಂಜನ್ ಎಸ್. ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಜು.7ರಂದು ವೇಣೂರು ಲಯನ್ಸ್ ಕ್ಲಬ್‌ನಲ್ಲಿ ನಡೆಯಿತು.


ಲಯನ್ಸ್ ದ್ವಿತೀಯ ರಾಜ್ಯಪಾಲರಾದ ಅರವಿಂದ ಶೆಣೈ ಕುಡುಪಿ ರವರು ಮಾತನಾಡಿ ನಮ್ಮ ಕಾರ್ಯದಲ್ಲಿ ಶ್ರದ್ಧೆ ಮತ್ತು ಸದಸ್ಯರ ನಡುವೆ ಪ್ರೀತಿ ವಿಶ್ವಾಸ ಮತ್ತು ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡರೆ ಕ್ಲಬ್ ನ್ನು ಉನ್ನತ ಸ್ಥಾನಕ್ಕೆ ಏರಿಸಬಹುದು ಮತ್ತು ಪದಾಧಿಕಾರಿಗಳಿಗೆ ತಮ್ಮ ತಮ್ಮ ಜವಬ್ದಾರಿಯನ್ನು ತಿಳಿಸಿದರು. ನಿಕಟಪೂರ್ವಾಧ್ಯಕ್ಷ ಸೀತಾರಾಮ್ ತನ್ನ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ 3 ಮಂದಿ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು.
ವೇದಿಕೆಯಲ್ಲಿ ಸಂಪುಟ ಕಾರ್ಯದರ್ಶಿ ಓಸ್‌ವಾಲ್ಟ್, ಕೋಶಾಧಿಕಾರಿ ಸುಧಾಕರ್ ಶೆಟ್ಟಿ, ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ, ಬೆಳ್ತಂಗಡಿ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಮೂಡಬಿದ್ರೆ ಕ್ಲಬ್ ಅಧ್ಯಕ್ಷ ಜೊಸ್ಸಿ ಮಿನೇಜಸ್, ಮುಚ್ಚೂರು ನೀರುಡೆ ಅಧ್ಯಕ್ಷ ರೋಶನ್ ಡಿಸೋಜ, ಅಲಂಗಾರ್ ಅಧ್ಯಕ್ಷ ಲಾಯ್ಟ್ ರೇಗೊ, ಗುರುಪುರ ಕೈಕಂಬ ಅಧ್ಯಕ್ಷ ಸುನೀಲ್ ಡಿಸೋಜ, ಸುಲ್ಕೇರಿ ಅಧ್ಯಕ್ಷ ರವಿ ಶೆಟ್ಟಿ ಬಪ್ಪನಾಡು, ಇನ್ಸ್‌ಪ್ಯಾರ್ ಅಧ್ಯಕ್ಷ ಎನ್. ಸುಧೀರ್ ಬಾಳಿಗ, ಪ್ರಾಂತ್ಯ 12 ವಲಯ ಅಧ್ಯಕ್ಷ ಪ್ರತಿಭಾ ಹೆಬ್ಬಾರ್, ವಲಯ 2ರ ಅಧ್ಯಕ್ಷ ಎಂ.ಕೆ. ದಿನೇಶ್, ಕೋಶಾಧಿಕಾರಿ ಲೂಕಾಶ್ ಕೋರಾಯ ಉಪಸ್ಥಿತರಿದ್ದರು.

ಸನ್ಮಾನ:

  1. ನೂತನವಾಗಿ ಆಯ್ಕೆಯಾದ ದ್ವಿತೀಯ ರಾಜ್ಯಪಾಲರಾದ ಅರವಿಂದ ಶೆಣೈ ಕುಡ್ಪಿ ರವರನ್ನು ಸನ್ಮಾನಿಸಿಲಾಯಿತು.
  2. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಾಧಿಕ ಅಂಕ ಗಳಿಸಿದ ಸ್ಥಳೀಯ ಹೈಸ್ಕೂಲ್‌ಗಳ 5 ವಿದ್ಯಾರ್ಥಿಗಳಾದ ಸೋನಾಲ್ ರೇಗೋ, ರಿತಿಷಾ, ಶ್ರಾವ್ಯ, ಹರ್ಷಿತಾ, ಸಿಂಚನಾ ಭಟ್ ರವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
  3. ವೇಣೂರು ನವಚೇತನ ವಿಶೇಷ ಮಕ್ಕಳಿಗೆ ಧನಸಹಾಯ ನೀಡಲಾಯಿತು.


ಲಯನ್ಸ್ ಜಗದೀಶ್ಚಂದ್ರ ಡಿ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ದಯಾನಂದ ಭಂಡಾರಿ ವಂದಿಸಿದರು.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya
error: Content is protected !!