25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ ಅಗತ್ಯ ಕ್ರಮ ಜರುಗಿಸಿದೆ.

ಮನೆಯ ಹಾಗೂ ಅಂಗಡಿಗಳ ಪಕ್ಕ ಮೋರಿ ಒಡೆದು ಹೋಗಿ, ಒಳಚರಂಡಿಯಲ್ಲಿ ಮಣ್ಣು, ಪ್ಲಾಸ್ಟಿಕ್ ತುಂಬಿಕೊಂಡಿತ್ತು. ಜೆಸಿಬಿ ಹಾಗೂ ಪಂಚಾಯತ್ ಸದಸ್ಯರ ಕೂಡುವಿಕೆಯೊಂದಿಗೆ ಚರಂಡಿ ಸರಿಪಡಿಸಿ, ಮೋರಿ ಅಳವಡಿಸಿ ನೀರು ಸರಗವಾಗಿ ಹರಿಯುವಂತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಸದಸ್ಯರಾದ ಗಣೇಶ್ ಕುಲಾಲ್, ಮುಸ್ತಾಫ ಹಾಗೂ ಸ್ಥಳಿಯರು ಉಪಸ್ಥಿತರಿದ್ದು ಕೆಲಸಕ್ಕೆ ಸೇರಿದರು.

Related posts

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!